ಮತ್ತೆ ವಸಂತನಾಗಮನ
ಮತ್ತೆ ಮತ್ತೆ ತರು ಲತೆಗಳಲಿ ನವ ಚೇತನ
ನೇಸರನ ತೀಕ್ಷಣತೆಗೆ ಒತ್ತು ಕೊಡುವ ಕಾಲ
ಬರುತಿದೆ ನೀರಿಗಾಗಿ ಬಾಯಿ ಬಿಡುವ ದಿನ
ಮೇಲೇರುತಿದೆ ಉರಿ ಬಿಸಿಲು
ಕಾಲ್ಕೆಳಗೆ ಸುಡು ಕಲ್ನಾರು
ಮರ ಒಣಗಿದರೇನು
ಗಿಡ ಚಿಗುರಿದರೇನು
ಇಂದಿನ ಹಸಿವು ತಣಿಸಬೇಕು
ಮಕ್ಕಳ ನಾಳೆ ಸುಗಮವಾಗಿರಿಸಿರಬೇಕು
ಇದೇ ನನ್ನ ಹಂಬಲ
ಇದಕಾಗೇ ನನ್ನ ಚಿಂತನೆ
ಒಮ್ಮೆ ಕೂಗಿದೆ ನಾನು
ಮಗು ಬೀಳುತಿರಲು,
ಅದ ಹಾಡೆಂದರು
ತಾವು ನಲಿದರು 😦
ಹಸಿವಲಿ ನರಳಿದೆ
ಅದನರ್ಥ ಮಾಡಿಕೊಳ್ಳದವರು
ಅದನೂ ಹಾಡೆಂದರು
ಕಥೆ ಕವನ ಕಟ್ಟಿದರು
ಕವಿಯಂತೆ ಮನ ಓಡಿಸಿದರು
ಕಪಿಯಂತೆ ಮರದೆಡೆಗೆ ನೋಟವಿಟ್ಟರು
ನನ್ನಿಂದ ಇನ್ನೂ ಹೆಚ್ಚು ಅಪೇಕ್ಷಿಸಿದರು
ಎನ್ನ ತಿಳಿಯದಾದರು
ತಿಳಿಯಲು ಇಚ್ಛೆಯೂ ಇಲ್ಲದವರು
ತಮ್ಮ ಸಂತಸವೇ ಮಿಗಿಲೆಂದವರು
ನನ್ನಳಲು ನನಗೇ ಗೊತ್ತು
ಮೂಢರಿಗೇನು ತಿಳಿದೀತು!
ನನ್ನ ಸ್ನೇಹಿತೆ ಕಾಗೆಯ
ವೈರಿ ಎಂದರು, ಎನ್ನ ಹೊನ್ನಶೂಲಕೇರಿಸಿದರು
ನಿಮಗೇನು ಗೊತ್ತು? ಹೇಗೆ ತಾನೆ ಗೊತ್ತಾಗಬೇಕು
ನಾನೇನೇ ಉಲಿದರೂ ಹಾಡೆಂದು ಅರ್ಥೈಸುವಿರಿ
ಪ್ರತಿಕ್ರಿಯೆಗಳು ಬರಲಿ, ಬಾರದಿರಲಿ, ಮನ ಮುದುಡಿಸಿಕೊಳ್ಳದೆಯೇ, ವಾರಕ್ಕೊಂದರಂತೆ ಶತಕ ಚಿತ್ರಗಳನ್ನು ಇತ್ತು, ಅನಿಸಿಕೆಗಳನ್ನು ಮೂಡಿಸಲು ಹಲವು ಮನಗಳಿಗೆ ಅನುವು ಮಾಡಿ ಕೊಟ್ಟ ಅಮರ, ಶ್ರೀ ಮತ್ತು ಶ್ರೀನಿಧಿಯವರುಗಳಿಗೆ ಮನಃಪೂರ್ವಕ ಕೃತಜ್ಞತೆಗಳು
2 replies on “ಸ್ವಹಿತದೆಡೆಗೇ ಮನ”
ಹಸಿವಲಿ ನರಳಿದೆ
ಅದನರ್ಥ ಮಾಡಿಕೊಳ್ಳದವರು
ಅದನೂ ಹಾಡೆಂದರು
ಕಥೆ ಕವನ ಕಟ್ಟಿದರು
ಪ್ರಸಿದ್ಧನಾಮರಿಗೆ privacy ಇರೊಲ್ಲವಂತೆ..ಇದೇ ಗೋಳು ಕೋಗಿಲೆಗೂ ಕಾಡಿದ್ದು ಮತ್ತು ಅದರ ಕಷ್ಟದಲ್ಲೂ ನಮ್ಮ ಇಷ್ಟವನ್ನು ಕಾಣುವುದು ಮನುಜ ಗುಣವೆಂದೂ..ಬಹು ಅರ್ಥಪೂರ್ಣ ಸಾಲುಗಳ ಮೂಲಕ ಚಿತ್ರಕ್ಕೆ ಬಿಂಬವನ್ನು ನೀಡಿದ್ದೀರಿ…ಈ ಸ್ಥರದ ಯೋಚನೆಗಳು ನಮಗೆ ಹತ್ತಿರವೂ ಸುಳಿಯುವುದಿಲ್ಲ ..ಇದರಲ್ಲಿ ಶೇ.ಒಂದು ಬಂದರೂ ಸಾರ್ಥಕ…ಧನ್ಯವಾದಗಳು…ಸರ್
ವಾವ್ ನನ್ನ ಒಂದು ವಾಕ್ಯದ ಎಲ್ಲಾ ಆಶಯಗಳನ್ನೂ ಒಳಗೊಂಡಿದೆ . ತುಂಬಾ ಧನ್ಯವಾದಗಳು